ಶ್ರೀನಗರ : ದಕ್ಷಿಣ ಕಾಶ್ಮೀರದ ಕುಲ್ ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ- ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೇನೆ ಹಾಗೂ ಸಿಆರ್ ಪಿಎಫ್ ಜೊತೆಗೂಡಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಧ್ಯಾಹ್ನ ಕುಲ್ ಗಾಮ್ ಬಳಿಯ ಹಳ್ಳಿಯೊಂದರಲ್ಲಿ ಈ ಎನ್ ಕೌಂಟರ್ ನಡೆಸಲಾಗಿದೆ.
ಜೂನ್. 28 ರಿಂದ ಆರಂಭವಾಗಲಿರುವ ಅಮರಾನಾಥ ಯಾತ್ರೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತೆರವುಗೊಳಿಸಲಾಗಿದ್ದು, ಅಲ್ಲಿ ಎನ್ ಕೌಂಟರ್ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ ಕೌಂಟರ್ ಪ್ರಗತಿಯಲ್ಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
Advertisement