ಜಮ್ಮುವಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಚೌಧರಿ ಲಾಲ್ ಮಾತನಾಡಿದ ಸಿಂಗ್, ಕಥುವಾ ಅತ್ಯಾಚಾರ ಪ್ರಕರಣದ ವರದಿಯ ದಾಟಿಯನ್ನು ಬದಲಿಸಿಕೊಳ್ಳದಿದ್ದರೆ ಇತ್ತೀಚೆಗೆ ಹತ್ಯೆಯಾದ ಪತ್ರಕರ್ತ ಶುಜಾತ್ ಬುಖಾರಿ ಗತಿಯೇ ನಿಮಗೂ ಬರುತ್ತದೆ. ನೀವು ಬದಕುವ ಮತ್ತು ಬರೆಯುವ ನಡುವೆ ಸ್ಪಷ್ಟವಾದ ಗೆರೆ ಎಳೆದುಕೊಳ್ಳಿ. ಬರವಣಿಗೆಯ ಶೈಲಿ ಬದಲಿಸಿಕೊಳ್ಳಿ. ಇಲ್ಲದಿದ್ದರೆ ಬದುಕು ದುರ್ಬರವಾಗುತ್ತದೆ. ಶುಜಾತ್ ಬುಖಾರಿ ಸ್ಥಿತಿ ತಂದುಕೊಳ್ಳಬೇಡಿ ಎಂದು ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದಾನೆ.