ಬಸ್ ಗೆ ಆಟೋ ಡಿಕ್ಕಿ: 9 ಮಂದಿ ದಾರುಣ ಸಾವು

ಸರ್ಕಾರಿ ಬಸ್ಸೊಂದಕ್ಕೆ ಆಟೋ ರಿಕ್ಷಾ ಢಿಕ್ಕಿಯಾಗಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 4 ಮಂದಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ವಿಜಯವಾಡ: ಸರ್ಕಾರಿ ಬಸ್ಸೊಂದಕ್ಕೆ ಆಟೋ ರಿಕ್ಷಾ ಢಿಕ್ಕಿಯಾಗಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಅಪಘಾತದ ತೀವ್ರತೆಗೆ 7 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 
ರಿಕ್ಷಾದಲ್ಲಿ ಮಹಿಳೆಯರು ಮತ್ತು ಅನಾರೋಗ್ಯಕ್ಕೀಡಾದವರು ನಾಟಿ ಔಷಧಿ ತರಲೆಂದು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. 
ಕರ್ನೂಲು -ನಂದ್ಯಾಲ್ ಹೆದ್ದಾರಿಯ ಸೋಮಯಾಜುಪಲ್ಲೆ ಬಳಿ ಅಪಘಾತ ಸಂಭವಿಸಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  
ಆಟೋದಲ್ಲಿ 13  ಮಂದಿ  ಪ್ರಯಾಣಿಸುತ್ತಿದ್ದರು, ಆಟೋ ಚಾಲಕ  ತಪ್ಪು ದಾರಿಯಲ್ಲಿ ಬರುತ್ತಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com