8 ಸಿಮಿ ಉಗ್ರರ ಎನ್‍ಕೌಂಟರ್: ನ್ಯಾಯಾಂಗ ಆಯೋಗದಿಂದ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್

2016ರಲ್ಲಿ ಭೋಪಾಲ್ ಸೆಂಟ್ರಲ್ ಜೈಲಿನಿಂದ ಪರಾರಿಯಾಗಿದ್ದ ಎಂಟು ಶಂಕಿತ ಸಿಮಿ ಉಗ್ರರ ಎನ್‍ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ಸಿಕ್ಕಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಭೋಪಾಲ್(ಮಧ್ಯಪ್ರದೇಶ): 2016ರಲ್ಲಿ ಭೋಪಾಲ್ ಸೆಂಟ್ರಲ್ ಜೈಲಿನಿಂದ ಪರಾರಿಯಾಗಿದ್ದ ಎಂಟು ಶಂಕಿತ ಸಿಮಿ ಉಗ್ರರ ಎನ್‍ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ವೆಂಟ್‌ ಆಫ್ ಇಂಡಿಯಾ(ಸಿಮಿ) ಸಂಘಟನೆಯ ಎಂಟು ಮಂದಿ ಶಂಕಿತ ಉಗ್ರರು 2016ರ ಅಕ್ಟೋಬರ್ 30ರ ರಾತ್ರಿ ಜೈಲು ಸಿಬ್ಬಂದಿಯೋರ್ವರನ್ನು ಹತ್ಯೆ ಮಾಡಿ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು. ಮಾರನೇ ದಿನ ಶಂಕಿತ ಉಗ್ರರನ್ನು ಎನ್‍ಕೌಂಟರ್ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. 
ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಸ್ ಕೆ ಪಾಂಡೆ ಅವರನ್ನೊಳಗೊಂಡ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಮಧ್ಯಪ್ರದೇಶದ ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com