ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸ ಮಾಡಿ: ದೆಹೆಲಿ ಸಿಎಂ ಕೇಜ್ರಿವಾಲ್ ಗೆ ಬಿಜೆಪಿ ನಾಯಕನ ಪತ್ರ
ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪತ್ರ ಬರೆದಿದ್ದು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗುವಂತೆ
ನವದೆಹಲಿ: ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪತ್ರ ಬರೆದಿದ್ದು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿದ್ದಾರೆ.
ಮುಂಗಾರು ಪ್ರಾರಂಭವಾಗಲಿದ್ದು ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಆದ್ದರಿಂದ ದೆಹಲಿ ಮುಖ್ಯಮಂತ್ರಿಗಳು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗಬೇಕೆಂದು ಹೇಳಿದ್ದಾರೆ. ವೈದ್ಯರು ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ ಎಂದು ಹೇಳಿರುವ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಮನೋಜ್ ತಿವಾರಿ, "ನೀವು ಆರೋಗ್ಯವಾಗಿದ್ದೀರಿ ಎಂದು ವೈದ್ಯರು ದೃಢೀಕರಿಸಿದ್ದಾರೆ. ಆದ್ದರಿಂದ ಸಾಧ್ಯವಾದಷ್ಟೂ ಶೀಘ್ರವೇ ದೆಹಲಿಗೆ ಆಗಮಿಸಿ ಕೆಲಸದಲ್ಲಿ ತೊಡಗಬೇಕೆಂದು ಆಗ್ರಹಿಸಿದ್ದಾರೆ.
ಮುಂಗಾರು ಪ್ರಾರಂಭವಾಗಲಿದ್ದು ಚರಂಡಿಗಳ ಸಮಸ್ಯೆಗಳನ್ನು ಬಗೆಹರಿಸಬೇಕಿದೆ, ಅಷ್ಟೇ ಅಲ್ಲದೇ ವಾಯುಮಾಲಿನ್ಯ, ವಿದ್ಯುತ್ ಕಡಿತ ಸೇರಿದಂತೆ ದೆಹಲಿಯ ಜನತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಅವುಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಮನೋಜ್ ತಿವಾರಿ ಒತ್ತಾಯಿಸಿದ್ದಾರೆ.