ಸ್ಮಾರ್ಟ್‌ಫೋನ್‌ಗಾಗಿ ತಂದೆಯನ್ನೇ ಕೊಂದ ಮಗ!

ಸ್ಮಾರ್ಟ್‌ಫೋನ್‌ ತೆಗೆದುಕೊಳ್ಳಲು ಹಣ ನೀಡಿಲ್ಲ ಅಂತ ಕೋಪಗೊಂಡ ತಂದೆಯನ್ನು ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ...
ಮೊಬೈಲ್
ಮೊಬೈಲ್
ಕಾನ್ಪುರ: ಸ್ಮಾರ್ಟ್‌ಫೋನ್‌ ತೆಗೆದುಕೊಳ್ಳಲು ಹಣ ನೀಡಿಲ್ಲ ಅಂತ ಕೋಪಗೊಂಡ ತಂದೆಯನ್ನು ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ. 
ಫತೇಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು 19 ವರ್ಷದ ಆನಂದ್ ಕಿಶೋಕ್ ತಿವಾರಿ ತನ್ನ ತಂದೆ 60 ವರ್ಷದ ಕೃಷ್ಣ ಕುಮಾರ್ ಎಂಬುವರನ್ನು ಗುದ್ದಲಿ ತೆಗೆದುಕೊಂಡು ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ತೀವ್ರ ರಕ್ತಸಾವ್ರವಾಗಿ ಕೃಷ್ಣ ಕುಮಾರ್ ಮೃತಪಟ್ಟಿದ್ದಾರೆ. 
ಘಟನೆ ವೇಳೆ ಕೃಷ್ಣ ಕುಮಾರ್ ಅವರು ಕಿರುಚಾಡಿದ್ದರಿಂದ ನೆರೆಹೊರೆಯವರು ಅಲ್ಲಿಗೆ ಬಂದು ತಪ್ಪಿಸಿಕೊಳ್ಳಲು ಮುಂದಾಗುತ್ತಿದ್ದ ಆನಂದ್ ನನ್ನ ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. 
ಕೃಷ್ಣ ಕುಮಾರ್ ಅವರಿಗೆ ನಾಲ್ಕು ಜನ ಗಂಡು ಮಕ್ಕಳಿದ್ದು ಮೂರನೇ ಮಗ ಆನಂದ್ ತಂದೆಯನ್ನೇ ಹತ್ಯೆ ಮಾಡಿದ್ದಾನೆ. ಕೆಲಸ ಕಾರ್ಯವಿಲ್ಲದೆ ಬೇಕಾಬಿಟ್ಟಿ ತಿರುಗಾಡಿಕೊಂಡಿದ್ದ ಆನಂದ್ ದುಡ್ಡಿದಾಗಿ ಪದೇ ಪದೇ ತಂದೆಯನ್ನು ಪೀಡಿಸುತ್ತಿದ್ದ. ಕಳೆದ ಶನಿವಾರ ರಾತ್ರಿ ತಾನು ಸ್ಮಾರ್ಟ್ ಫೋನ್ ತೆಗೆದುಕೊಳ್ಳಬೇಕು ಹಣ ನೀಡುವಂತೆ ಒತ್ತಾಯ ಮಾಡಿದ್ದಾನೆ. ಈ ವೇಳೆ ಕೃಷ್ಣ ಕುಮಾರ್ ಹಣ ನೀಡಲು ನಿರಾಕರಿಸಿದ್ದರಿಂದ ಕೋಪಗೊಂಡು ಆನಂದ್ ತಂದೆಯನ್ನೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com