ಕೃಷ್ಣ ಕುಮಾರ್ ಅವರಿಗೆ ನಾಲ್ಕು ಜನ ಗಂಡು ಮಕ್ಕಳಿದ್ದು ಮೂರನೇ ಮಗ ಆನಂದ್ ತಂದೆಯನ್ನೇ ಹತ್ಯೆ ಮಾಡಿದ್ದಾನೆ. ಕೆಲಸ ಕಾರ್ಯವಿಲ್ಲದೆ ಬೇಕಾಬಿಟ್ಟಿ ತಿರುಗಾಡಿಕೊಂಡಿದ್ದ ಆನಂದ್ ದುಡ್ಡಿದಾಗಿ ಪದೇ ಪದೇ ತಂದೆಯನ್ನು ಪೀಡಿಸುತ್ತಿದ್ದ. ಕಳೆದ ಶನಿವಾರ ರಾತ್ರಿ ತಾನು ಸ್ಮಾರ್ಟ್ ಫೋನ್ ತೆಗೆದುಕೊಳ್ಳಬೇಕು ಹಣ ನೀಡುವಂತೆ ಒತ್ತಾಯ ಮಾಡಿದ್ದಾನೆ. ಈ ವೇಳೆ ಕೃಷ್ಣ ಕುಮಾರ್ ಹಣ ನೀಡಲು ನಿರಾಕರಿಸಿದ್ದರಿಂದ ಕೋಪಗೊಂಡು ಆನಂದ್ ತಂದೆಯನ್ನೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.