ಉತ್ತರ ಪ್ರದೇಶ : ಮುಜಾಫರ್ ನಗರದ ಗುಜರಿ ಅಂಗಡಿ ಬಳಿ ಸ್ಫೋಟ - ನಾಲ್ವರು ಸಾವು

ಉತ್ತರ ಪ್ರದೇಶ ರಾಜ್ಯದ ಮುಜಾಫರ್ ನಗರದ ಗುಜರಿ ಅಂಗಡಿ ಬಳಿ ಇಂದು ಮಧ್ಯಾಹ್ನ ಸ್ಪೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಸ್ಟೋಟ ಸಂಭವಿಸಿದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ
ಸ್ಟೋಟ ಸಂಭವಿಸಿದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ

ಮುಜಾಫರ್ ನಗರ : ಉತ್ತರ ಪ್ರದೇಶ ರಾಜ್ಯದ  ಮುಜಾಫರ್ ನಗರದ ಗುಜರಿ ಅಂಗಡಿ ಬಳಿ  ಇಂದು ಮಧ್ಯಾಹ್ನ ಸ್ಪೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಸಿವಿಲ್ ಲೈನ್ ಪೊಲೀಸ್ ಠಾಣೆ ಪ್ರದೇಶದ  ಸರ್ವತ್  ರಸ್ತೆಯಲ್ಲಿ ಈ ಘಟನೆ ನಡೆದಿದೆ.  ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರೀಯ ದಳ ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಭಯೋತ್ಪಾದನೆ ನಿಗ್ರಹ ದಳ ಹಾಗೂ ಮೀರತ್ ನಿಂದ ಆಗಮಿಸಿರುವ ಸೇನಾ ತಂಡ ಸ್ಪೋಟ ಸಂಭವಿಸಿದ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟಕ್ಕೆ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನಂತದೇವ್ ತಿವಾರಿ ತಿಳಿಸಿದ್ದಾರೆ.

ಗುಜರಿ ಅಂಗಡಿಯಲ್ಲಿನ ವಸ್ತುಗಳನ್ನು ವಿಲೇವಾರಿ ಮಾಡುತ್ತಿದ್ದಾಗ ಸ್ಪೋಟ ಸಂಭವಿಸಿದ್ದು,  50 ವರ್ಷದ ತಾಜಿಮ್, 55 ವರ್ಷದ ಶಾಜಾದ್  ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ.  ಮೂವರು ದಾರಿಹೋಕರರು  ಗಾಯಗೊಂಡಿದ್ದಾರೆ ಎಂದು  ವೃತ್ತ  ಅಧಿಕಾರಿ ಹರೀಶ್  ಬಾಂಡೊರಿಯಾ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com