ಮುಜಾಫರ್ ನಗರ : ಉತ್ತರ ಪ್ರದೇಶ ರಾಜ್ಯದ ಮುಜಾಫರ್ ನಗರದ ಗುಜರಿ ಅಂಗಡಿ ಬಳಿ ಇಂದು ಮಧ್ಯಾಹ್ನ ಸ್ಪೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಸಿವಿಲ್ ಲೈನ್ ಪೊಲೀಸ್ ಠಾಣೆ ಪ್ರದೇಶದ ಸರ್ವತ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರೀಯ ದಳ ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಭಯೋತ್ಪಾದನೆ ನಿಗ್ರಹ ದಳ ಹಾಗೂ ಮೀರತ್ ನಿಂದ ಆಗಮಿಸಿರುವ ಸೇನಾ ತಂಡ ಸ್ಪೋಟ ಸಂಭವಿಸಿದ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟಕ್ಕೆ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನಂತದೇವ್ ತಿವಾರಿ ತಿಳಿಸಿದ್ದಾರೆ.
Advertisement