ನಿತೀಶ್ ಗೆ ಮೈತ್ರಿ ಬಾಗಿಲು ಮುಚ್ಚಿದೆ- ತೇಜಸ್ವಿ ಯಾದವ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮೈತ್ರಿ ಸಾಧ್ಯತೆ ಇಲ್ಲ, ಮಹಾಮೈತ್ರಿಯಲ್ಲಿ ಅವರಿಗೆ ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
ತೇಜಸ್ವಿ ಯಾದವ್
ತೇಜಸ್ವಿ ಯಾದವ್
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮೈತ್ರಿ ಸಾಧ್ಯತೆ ಇಲ್ಲ, ಮಹಾಮೈತ್ರಿಯಲ್ಲಿ ಅವರಿಗೆ  ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು  ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
ನಿತೀಶ್ ಕುಮಾರ್ ಕಚೇರಿ ಮುಚ್ಚಿದ್ದರೆ ಆ ಸ್ಥಾನವನ್ನು ತೇಜಸ್ವಿ ಯಾದವ್ ಅಲಂಕರಿಸಲಿದ್ದಾರೆ ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾ ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಹೇಳಿಕೆ  ನೀಡಿದ್ದಾರೆ.
ಫೆಬ್ರವರಿ ತಿಂಗಳಲ್ಲಿ ಮಾಂಝಿ ಎನ್ ಡಿಎ ತೊರೆದು ಆರ್ ಜೆಡಿ ನೇತೃತ್ವದ ಮಹಾಮೈತ್ರಿಯಲ್ಲಿ ಸೇರ್ಪಡೆಯಾಗಿದ್ದರು.
ಜೆಡಿಯು ಹಾಗೂ ಆರ್ ಜೆಡಿ ಮೈತ್ರಿಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಕೆಲ ದಿನ ಕಾರ್ಯನಿರ್ವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com