ತಾಳ್ಮೆಯಿಂದಿರಿ, 2019ರ ಲೋಕಸಭೆ ಮುನ್ನ ರಾಮ ಮಂದಿರ ನಿರ್ಮಾಣವಾಗಲಿದೆ: ಹಿಂದೂ ಸಂತರಿಗೆ ಯೋಗಿ ಅಭಯ

2019ರ ಲೋಕಸಭೆ ಚುನಾವಣೆಗೂ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ, ಪ್ರಜಾ ಪ್ರಭುತ್ವ ವ್ಯವಸ್ಥೆಯಾಗಿರುವುದರಿಂದ ನಂಬಿಕೆಯಿಟ್ಟು ...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಅಯೋಧ್ಯೆ: 2019ರ ಲೋಕಸಭೆ ಚುನಾವಣೆಗೂ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ, ಪ್ರಜಾ ಪ್ರಭುತ್ವ ವ್ಯವಸ್ಥೆಯಾಗಿರುವುದರಿಂದ ನಂಬಿಕೆಯಿಟ್ಟು ತಾಳ್ಮೆಯಿಂದಿರುವಂತೆ ಹಿಂದೂ ಸಂತರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಭರವಸೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ನಡೆದ ಹಿಂಧೂ ಸಂತರ ಸಮಾವೇಶದಲ್ಲಿ ಯೋಗಿ ಆದಿತ್ಯನಾಥ್ ಮಾತನಾಡಿದರು, ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ  ರಾಮ್ ವಿಲಾಸ್ ವೇದಾಂತಿ, ಮೊಗಲ್  ರಾಜ ಬಾಬಪ್ ರಾಮ ಮಂದಿರ ನಾಶ ಮಾಡಲು  ಕೋರ್ಟ್ ಆದೇಶ ತಂದಿರಲಿಲ್ಲ ಎಂಬ ಹೇಳಿಕೆಗೆ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದರು.
ನಾವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ, ನ್ಯಾಯಾಂಗ ವ್ಯವಸ್ಥೆಯಿದೆ ಅದಕ್ಕೆ ಅದರದ್ದೇ ಆದ ನೀತಿ ನಿಯಮಗಳಿವೆ,  ಇದನ್ನೆಲ್ಲಾ ನಾವು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com