ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಾವು ತಾಳ್ಮೆ ಕಳೆದುಕೊಳ್ಳುತ್ತಿದ್ದೇವೆ, ಅಕ್ಟೋಬರ್ ವೇಳೆಗೆ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿಯಾಗದೇ ಇದ್ದಲ್ಲಿ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕಾಗುತ್ತದೆ ಎಂದು ತೊಗಾಡಿಯಾ ಹೇಳಿದ್ದಾರೆ. ಇದೇ ವೇಳೆ ಕಾಶಿ ವಿಶ್ವನಾಥ ದೇವಾಲಯ, ಮಥುರಾದಲ್ಲಿರುವ ಕೃಷ್ಣಜನ್ಮಭೂಮಿ, ಅಯೋಧ್ಯೆಯಲ್ಲಿರುವ ರಾಮ ಜನ್ಮಭೂಮಿಯನ್ನು ಹಿಂದೂಗಳಿಗೆ ಹಸ್ತಾಂತರಿಸಲು ಕಾನೂನು ಜಾರಿಗೊಳಿಸಬೇಕೆಂದು ತೊಗಾಡಿಯಾ ಮೋದಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.