ಗುಜರಾತ್ ನ ಸಬರಮತಿ ನದಿಯ ಪಾರ್ಕ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಾತನಾಡಿದರು. ಈ ವೇಳೆ ಕೇಂದ್ರ ಸರ್ಕಾರ 10 ಕೋಟಿ ಜನರಿಗೆ ಉದ್ಯೋಗ ಕಲ್ಪಿಸಿದ್ದು, ತಮ್ಮ ಸಚಿವಾಲಯದಿಂದ ಕೋಟ್ಯಂತರ ಜನ ಉದ್ಯೋಗ ಪಡೆದಿದ್ದಾರೆ. ಕೇಂದ್ರ ಸರ್ಕಾರದ ಮುದ್ರಾ ಯೋಜನೆ ಅಡಿಯಲ್ಲಿ 10 ಕೋಟಿ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ. ಮಾಸಿಕ 12 ಸಾವಿರ ರೂ. ನೀಡಬಲ್ಲ ಶೇ.70ರಷ್ಟು ಉದೋಗ ಸೃಷ್ಟಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಕೌಶಲ್ಯ ತರಬೇತಿ ಕುರಿತು ಯೋಜನೆ ಹಮ್ಮಿಕೊಂಡಿದ್ದು, ಯೋಜನೆ ಅಡಿಯಲ್ಲಿ ಕೋಟ್ಯಂತರ ಮಂದಿ ಫಲಾನುಭವಿಗಳಿದ್ದಾರೆ ಎಂದು ಹೇಳಿದರು.