ಅಮರನಾಥ ಯಾತ್ರಿಕರು ರೈಲ್ವೇ ಮಾರ್ಗವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರಮುಖವಾಗಿ ಉಧಂಪುರ ರೈಲ್ವೇ ನಿಲ್ದಾಣದ ಮೂಲಕ ಪ್ರಯಾಣ ಬೆಳೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರೈಲ್ವೇ ನಿಲ್ದಾಣದ ಮುಖ್ಯ ದ್ವಾರದಲ್ಲಿ ಹಲವು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಕ್ಸ್-ರೇ ಮಷಿನ್, ಬ್ಯಾಗ್ ಸ್ಕ್ಯಾನರ್, ಭದ್ರತಾ ನಾಯಿಗಳಿಂದ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ. ರೈಲ್ವೇ ರಕ್ಷಣಾ ಪಡೆಗಳು ಕೂಡ ನಮ್ಮೊಂದಿಗೆ ಕೈಜೋಡಿಸಿವೆ ಎಂದು ತಿಳಿಸಿದ್ದಾರೆ.