ಈ ಹಿಂದೆ ಹೇಳಿಕೆ ನೀಡಿದ್ದ ಗುಲಾಂ ನಬಿ ಆಜಾದ್ ಅವರು, ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಉಂಟಾಗುವ ಸಾವಿಗಿಂತಲೂ ಹೆಚ್ಚಾಗಿ ಸೇನಾ ಕಾರ್ಯಾಚರಣೆಯಿಂದಲೇ ಜನರು ಸಾವನ್ನಪ್ಪುತ್ತಿದ್ದಾರೆ. ಯೋಧರ ದಾಳಿ, ಉಗ್ರರಿಗಿಂತ ಹೆಚ್ಚಾಗಿ ಜನಸಾಮಾನ್ಯರನ್ನೇ ಗುರಿಯಾಗಿಸಿದೆ. ಉದಾಹರಣೆಗೆ ಪುಲ್ವಾಮಾದಲ್ಲಿ ಯೋಧರ ದಾಳಿಗೆ ಬಲಿಯಾಗಿದ್ದು, ಓರ್ವ ಉಗ್ರನಾಗಿದ್ದರೆ, ಅದೇ ವೇಳೆ 13 ಅಮಾಯಕ ನಾಗರೀಕರು ಸಾವನ್ನಪ್ಪಿದ್ದಾರೆಂದು ಹೇಳಿದ್ದರು.