ನಾವು ಅತ್ಯಂತ ಜನ ಸ್ನೇಹಿ ರೀತಿಯಾಗಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದೇವೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಕ್ರೂರವಾಗಿ ವರ್ತಿಸುತ್ತಿವೆ ಎಂಬ ಪ್ರೇರಿತ ವರದಿಗಳು ಸುಳ್ಳು...
ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್
ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಕ್ರೂರವಾಗಿ ವರ್ತಿಸುತ್ತಿವೆ ಎಂಬ ಪ್ರೇರಿತ ವರದಿಗಳು ಸುಳ್ಳು ಎಂದಿರುವ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು, ಭಾರತೀಯ ಸೇನೆ ಜನ ಸ್ನೇಹಿ ರೀತಿಯಲ್ಲಿ ಕಾರ್ಯಚರಣೆ ನಡೆಸುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಶ್ಮೀರ ಕಣವೆಯಲ್ಲಿ ಜನರ ಶಾಂತಿಯನ್ನು ಹಾಳು ಮಾಡಿ, ಹಿಂಸಾಚಾರ ಸೃಷ್ಟಿಸುತ್ತಿರುವ ಉಗ್ರರನ್ನು ಮಟ್ಟ ಹಾಕುವುದು ನಮ್ಮ ಪ್ರಮುಖ ಉದ್ದೇಶವಾಗಿದೆಯೇ ಹೊರತು, ಜನರಿಗೆ ಅನಾನುಕೂಲ ಸೃಷ್ಟಿಸುವುದು ನಮ್ಮ ಉದ್ದೇಶವಲ್ಲ ಎಂದು ಹೇಳಿದ್ದಾರೆ. 
ಹಲವು ಕಠಿಣ ನಿಯಮಗಳ ಅಡಿಯಲ್ಲಿ ಸೇನೆ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಹಿಂದಕ್ಕೆ ಹೆಜ್ಜೆ ಇಡುವ ಮಾತೇ ಇಲ್ಲ, ನಮ್ಮ ಕಾರ್ಯಾಚರಣೆಗಳು ಹೀಗೆಯೇ ಮುಂದುವರೆಯಲಿದೆ. ನಾವು ಜನ ಸ್ನೇಹಿ ರೀತಿಯಲ್ಲಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದೇವೆ. ಕಾರ್ಯಾಚರಣೆ ವೇಳೆ ಸೇನೆ ಕ್ರೂರವಾಗಿ ವರ್ತಿಸುತ್ತಿವೆ ಎಂಬ ವರದಿಗಳು ಸುಳ್ಳು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com