ಪುಲ್ವಾಮ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನ ಹತ್ಯೆ, ಇನ್ನಿಬ್ಬರು ಪರಾರಿ: ಕಾಶ್ಮೀರ ಪೊಲೀಸರು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆ ನಡೆದ ಎನ್ ಕೌಂಟರ್ ಸ್ಥಳದಲ್ಲಿ ಕೇವಲ ಓರ್ವ ಉಗ್ರನ ಮೃತದೇಹ ಮಾತ್ರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆ ನಡೆದ ಎನ್ ಕೌಂಟರ್ ಸ್ಥಳದಲ್ಲಿ ಕೇವಲ ಓರ್ವ ಉಗ್ರನ ಮೃತದೇಹ ಮಾತ್ರ ಸಿಕ್ಕಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಹತ್ಯೆಯಾದ ಎಲ್ ಇಟಿ ಉಗ್ರ ಸಜದ್ ಅಹ್ಮದ್ ಶಾ ಎಂದು ಗುರುತಿಸಲಾಗಿದ್ದು, ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಚೋಗುಲ್ ನಿವಾಸಿ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.
ಹತ್ಯೆಯಾದ ಉಗ್ರ ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಮತ್ತು ನಾಗರಿಕರ ಮೇಲೆ ನಡೆದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದ ಎಂದು ಅವರು ತಿಳಿಸಿದ್ದಾರೆ.
ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ನಿನ್ನೆ ಕಾರ್ಯಾಚರಣೆ ಆರಂಭಿಸಿದ್ದವು. ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ನಂಬಿದ್ದರು. ಆದರೆ ಓರ್ವ ಹತ್ಯೆಯಾಗಿದ್ದು, ಇನ್ನಿಬ್ಬರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com