ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ನಿಯತಕಾಲಿಕೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ದಾಖಲಿಸಿದ್ದಾರೆ. ಕೊಲ್ಲಂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಕೀಲ ವಿನೋದ್ ಮ್ಯಾಥ್ಯೂ ವಿಲ್ಸನ್ ಎಂಬುವವರು ದೂರು ದಾಖಲಿಸಿದ್ದು, ಇದು ಅಶ್ಲೀಲ ಮತ್ತು ಭಾರತೀಯ ಸಂಸ್ಕೃತಿಗೆ ಮಾಡಿರುವ ಅಪಮಾನ ಎಂದು ದೂರಿನಲ್ಲಿ ಆಕ್ಷೇಪಿಸಿದ್ದಾರೆ.