ಅನಾರೋಗ್ಯದಿಂದಾಗಿ ಚೆನ್ನೈ ಆಸ್ಪತ್ರೆಗೆ ಕೇರಳ ಸಿಎಂ ಪಿಣರಾಯಿ ದಾಖಲು

ಅನಾರೋಗ್ಯ ಕಾರಣದಿಂದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿನ್ನೆ ಚೆನ್ನೈ ನ ಅಪಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್
Updated on
ಚೆನ್ನೈ: ಅನಾರೋಗ್ಯ ಕಾರಣದಿಂದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿನ್ನೆ ಚೆನ್ನೈ ನ ಅಪಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂತ್ರ ಸಂಬಂಧಿತ ಕಾಯಿಲೆಯಿಂದಾಗಿ ಪಿಣರಾಯಿ ವಿಜಯನ್ ಆಸ್ಪತ್ರೆಗೆ ದಾಖಲಾಗಿದ್ದಾರೆ, ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರಿಗೆ ಯಾವ ತೊಂದರೆಯಾಗಿದೆ ಎಂಬುದನ್ನು ಇದುವರೆಗೂ ಸಾರ್ವಜನಿಕವಾಗಿ ಬಹಿರಂಗ ಪಡಿಸಿಲ್ಲ. 
ಪಿಣರಾಯಿ ಅವರು ರಾತ್ರಿ 11.55ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು, ಇದೊಂದು  ದೈನಂದಿನ ಚೆಕ್ ಅಪ್ ಗಾಗಿ ಬಂದಿದ್ದಾರೆ, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಪೊಲೋ ಆಸ್ಪತ್ರೆ ರಿಲೀಸ್ ಮಾಡಿರುವ ಮೆಡಿಕಲ್ ಬುಲೆಟಿನ್  ನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com