ಇನ್ನು ಸಿಎಂ ಪಳನಿ ಸ್ವಾಮಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಕೆ ಸ್ಚಾಲಿನ್, ತಮಿಳುನಾಡಿನ ಸರ್ವಪಕ್ಷ ನಿಯೋಗ ಭೇಟಿಗೆ ನಿರಾಕರಿಸುವ ಮೂಲಕ ಮತ್ತೆ ಪ್ರಧಾನಿ ಮೋದಿ ತಮಿಳುನಾಡು ಜನತೆಯ ಬೆನ್ನಿಗೆ ಚೂರಿ ಹಾಕಿದ್ದಾರೆ. ಕಾವೇರಿ ವಿಚಾರದಲ್ಲಿ ತಮಿಳುನಾಡಿನ ವಿಶ್ವಾಸಕ್ಕೆ ಪ್ರಧಾನಿ ಮೋದಿ ದ್ರೋಹ ಬಗೆದಿದ್ದು, ಸಂಬಂಧ ಸಿಎಂ ಪಳನಿ ಸ್ವಾಮಿ ಅವರೊಂದಿಗೆ ನಾವು ಚರ್ಚಿಸಿದ್ದೇವೆ. ಅಲ್ಲದೇ ವಿಶೇಷ ಅಧಿವೇಶನ ಕರೆದು ನಿರ್ಣಯ ಅಂಗೀಕರಿಸುವಂತೆ ಸಲಹೆ ನೀಡಿದ್ದೇವೆ. ಪಳನಿ ಸ್ವಾಮಿ ಅವರೂ ಕೂಡ ವಿಶೇಷ ಅಧಿವೇಶನ ಕರೆಯುವುದಾಗಿ ಹೇಳಿದ್ದಾರೆ.