ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಮೇಜರ್ ಆದಿತ್ಯಾ ಕುಮಾರ್ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಕರಮ್ ವೀರ್ ಸಿಂಗ್ ಅವರ ಪುತ್ರರಾಗಿದ್ದಾರೆ. ಇದೇ ಕರ್ನಲ್ ಕರಮ್ ವೀರ್ ಸಿಂಗ್ ಅವರು ಪ್ರಕರಣದಿಂದ ತಮ್ಮ ಪುತ್ರ ಹೆಸರನ್ನು ಕೈ ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮಗ ತನ್ನ ಕರ್ತವ್ಯ ನಿರ್ವಹಿಸಿದ್ದಾನೆ. ಅವನ ಮೇಲೆ ದೂರು ದಾಖಲಿಸಿರುವುದು ತಪ್ಪು ಮತ್ತು ನಿರಂಕುಶ ನಿರ್ಧಾರವಾಗಿದೆ. ಉದ್ರಿಕ್ತ ಜನರ ಗುಂಪಿನಿಂದ ಸುರಕ್ಷಿತವಾಗಿ ಹೊರಬರಲು ಸೈನಿಕರು ಗುಂಡು ಹಾರಿಸಿದ್ದಾರೆ ಎಂದು ಕರ್ಮವೀರ್ ಸಿಂಗ್ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಈ ಹಿಂದೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಭಾರತೀಯ ಸೇನೆಯ ಮೇಜರ್ ಮೇಲೆ ರಾಜ್ಯ ಪೊಲೀಸರು ದಾಖಲಿಸಿರುವ ಎಫ್ಐಆರ್ ಆಧರಿಸಿ ಕ್ರಮ ಜರುಗಿಸಲು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ತಡೆ ನೀಡಿತ್ತು.