ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದು, ಈ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಇಬ್ಬರು ದುಷ್ಕರ್ಮಿಗಳು ಕಚೇರಿ ಬಳಿ ಆಗಮಿಸಿ ತಾವು ತಂದಿದ್ದ ಪೆಟ್ರೋಲ್ ಬಾಂಬ್ ಗಳನ್ನು ಎಸೆದು ಪರಾರಿಯಾಗಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ಓರ್ವ ಪೊಲೀಸ್ ಪೇದೆ ದುಷ್ಕರ್ಮಿಗಳನ್ನು ಹಿಡಿಯಲು ಪ್ರಯತ್ನಿಸಿದರಾದರೂ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.