ನಿನ್ನೆಯಷ್ಟೇ ಪ್ರಚೋದನಕಾರಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಎಚ್ ರಾಜಾ, ತ್ರಿಪುರಾದಲ್ಲಿ ಕಮ್ಯುನಿಸ್ಟ್ ಕ್ರಾಂತಿಕಾರಿ ಲೆನಿನ್ ಪ್ರತಿಮೆಗೆ ಆದ ಗತಿಯೇ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಗೆ ಆಗಲಿದೆ ಎಂದು ಎಚ್. ರಾಜಾ ಅವರು ಫೇಸ್ ಬುಕ್ ಪೋಸ್ಟ್ ಹಾಕಿದ್ದರು. ಅಲ್ಲದೆ ಪೆರಿಯಾರ್ ಒಬ್ಬ ಜಾತಿವಾದಿ, ಅವರ ಪ್ರತಿಮೆಯನ್ನ ಕಿತ್ತೊಗೆಯಬೇಕು ಎಂದು ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ತಮಿಳುನಾಡಿನಲ್ಲಿ ನಿನ್ನೆ ಇಬ್ಬರು ದುಷ್ಕರ್ಮಿಗಳು ರಾತ್ರಿ 9 ಗಂಟೆಯ ಸುಮಾರಿಗೆ ವೆಲ್ಲೋರ್ ನಗರ ಪಾಲಿಕೆ ಕಚೇರಿಯಲ್ಲಿರುವ ಪೆರಿಯಾರ್ ಪ್ರತಿಮೆಯನ್ನು ಧ್ವಂಸಗೊಳಿಸಿದ್ದರು. ಪ್ರತಿಮೆ ಧ್ವಂಸಗೊಳಿಸಿದ ವ್ಯಕ್ತಿಗಳನ್ನು ಮುತ್ತುರಾಮನ್ ಮತ್ತು ಫ್ರಾನ್ಸಿಸ್ ಎಂದು ಗರುತಿಸಲಾಗಿದ್ದು, ಕುಡಿತದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.