ಆರೋಪಿಗಳನ್ನು 11 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದ್ದ ಸಿಬಿಐ ಇಂದು ಕೋರ್ಟ್ ಗೆ ಹಾಜರುಪಡಿಸಿತು. ಈ ವೇಳೆ ಕೊಠಾರಿ ಅವರು ತಮ್ಮ ವಯಸ್ಸು ಮತ್ತು ವೈದ್ಯಕೀಯ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು. ಆದರೆ ಇದಕ್ಕೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿತು. ವಿಕ್ರಮ್ ಕೊಠಾರಿ ಮತ್ತು ಪುತ್ರ ರಾಹುಲ್ ಇಬ್ಬರೂ ಆರೋಗ್ಯವಾಗಿದ್ದು, ಮಧ್ಯಂತರ ಜಾಮೀನು ನೀಡದಂತೆ ಸಿಬಿಐ ಮನವಿ ಮಾಡಿತು. ಸಿಬಿಐ ಮನವಿ ಪುರಸ್ಕರಿಸಿದ ಕೋರ್ಟ್ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.