ಈ ಹಿಂದೆ ಕೇಂದ್ರ ವಿತ್ತ ಸಚಿವಾಲಯದ ಅಧಿಕಾರಿಗಳು ಮತ್ತು ಅರುಣ್ ಜೇಟ್ಲಿ ಅವರೊಂದಿಗಿನ ಸರಣಿ ಭೇಟಿ, ಮನವಿ ಸಲ್ಲಿಕೆಗಳ ಬಳಿಕವೂ ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿಲ್ಲ. ಪ್ರಮುಖವಾಗಿ ವಿಭಜಿತ ಆಂಧ್ರ ಪ್ರದೇಶ ಸಂಕಷ್ಟದಲ್ಲಿದ್ದು, ಕೈಗಾರಿಕಾ ಪ್ರೋತ್ಸಾಹ ಭತ್ಯೆ ನೀಡುವಂತೆ ಕೇಂದ್ರಸರ್ಕಾರವನ್ನು ಟಿಡಿಪಿ ಮನವಿ ಮಾಡಿಕೊಂಡಿತ್ತು. ಆದರೆ ಇದಕ್ಕೆ ನಿರಾಕರಿಸಿದ್ದ ಕೇಂದ್ರ ಸರ್ಕಾರ, ಆರ್ಥಿಕ ವಿಶೇಷ ಪ್ಯಾಕೇಜ್ ಘೋಷಣೆ ಮಾತ್ರ ಮಾಡಿತ್ತು.