ತ್ರಿಪುರಾದಲ್ಲಿ 25 ವರ್ಷಗಳ ಎಡರಂಗದ ಆಳ್ವಿಕೆ ಅಂತ್ಯಗೊಂಡ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಲೆನಿನ್ ಪ್ರತಿಮೆಯನ್ನ ಹೊಡೆದುರುಳಿಸಿ ಅಟ್ಟಹಾಸ ಮೆರೆಯಲಾಗಿದೆ. ಇದರ ಬೆನ್ನಲ್ಲೇ ತ್ರಿಪುರಾದಲ್ಲಿ ಕಮ್ಯುನಿಸ್ಟ್ ಕ್ರಾಂತಿಕಾರಿ ಲೆನಿನ್ ಪ್ರತಿಮೆಗೆ ಆದ ಗತಿಯೇ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಗೆ ಆಗಲಿದೆ ಎಂದು ಎಚ್. ರಾಜಾ ಅವರು ಫೇಸ್ಬುಕ್ ಪೋಸ್ಟ್ ಹಾಕಿದ್ದರು. ಅಲ್ಲದೆ ಪೆರಿಯಾರ್ ಒಬ್ಬ ಜಾತಿವಾದಿ, ಅವರ ಪ್ರತಿಮೆಯನ್ನ ಕಿತ್ತೊಗೆಯಬೇಕೆಂದು ಎಂದು ಉಲ್ಲೇಖಿಸಿದ್ದರು.