ಬಿಹಾರ್ ಸಿಎಂ ನಿತೀಶ್ ಕುಮಾರ್, ನಾಯ್ಡು ರೀತಿ ಧೈರ್ಯ ತೋರಲಿ: ಆರ್ ಜೆಡಿ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕೇಳಬೇಕು ಎಂದು....
ಮನೋಜ್ ಜಾ
ಮನೋಜ್ ಜಾ
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕೇಳಬೇಕು ಎಂದು ಒತ್ತಾಯಿಸಿರುವ ಆರ್ ಜೆಡಿ, ಈ ವಿಚಾರದಲ್ಲಿ ನಿತೀಶ್ ಕುಮಾರ್ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ರೀತಿ ಧೈರ್ಯ ಪ್ರದರ್ಶಿಸಲಿ ಎಂದು ಗುರುವಾರ ಹೇಳಿದೆ.
ನಿತೀಶ್ ಕುಮಾರ್ ಅವರು ಕನಿಷ್ಠ ಒಂಂದು ಪರ್ಸೆಂಟ್ ಆದ್ರೂ ಚಂದ್ರಬಾಬು ನಾಯ್ಡು ರೀತಿ ಧೈರ್ಯ ತೋರಿ, ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೇಳಲಿ ಎಂದು ಆರ್ ಜೆಡಿ ವಕ್ತಾರ ಮನೋಜ್ ಜಾ ಅವರು ಹೇಳಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ನಮ್ಮ ಮುಖ್ಯಮಂತ್ರಿಗಳು ಏಕೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯುತ್ತಿದ್ದಾರೆ? ಎಂದು ಜಾ ಪ್ರಶ್ನಿಸಿದ್ದಾರೆ. 
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಟಿಡಿಪಿಯ ಇಬ್ಬರು ಕೇಂದ್ರ ಸಚಿವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com