ಅಂಶು ಪ್ರಕಾಶ್ ಅವರ ಮೇಲೆ ಆಮ್ ಆದ್ಮಿ ಪಕ್ಷದ ಶಾಸಕರು ಹಲ್ಲೆ ನಡೆಸಿದ ಮಾರನೇ ದಿನ ಫೆ.20ರಂದು ನಿಗದಿಯಾಗಿದ್ದ ಪ್ರಶ್ನೆ ಮತ್ತು ಉಲ್ಲೇಖ ಸದನ ಸಮಿತಿ ಸಭೆಗೆ ಮುಖ್ಯ ಕಾರ್ಯದರ್ಶಿ ಗೈರು ಆಗಿದ್ದರು. ಅಲ್ಲದೆ ಫೆ.21 ಮತ್ತು 23ರಂದು ನಡೆದ ಸಭೆಗೂ ಅವರು ಗೈರು ಆಗಿದ್ದರು. ಈ ಹಿನ್ನೆಲೆಯಲ್ಲಿ ಸದನ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಮಾರ್ಚ್ 1ರಂದು ನೋಟಿಸ್ ನೀಡಲಾಗಿತ್ತು.