ದೆಹಲಿ ಹೈಕೋರ್ಟ್ ಆದೇಶದಂತೆ ಪಟಿಯಾಲ ಹೌಕೋರ್ಟ್ ಆವರಣದಲ್ಲಿ ಎರಡು ವಿಶೇಷ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ. ಸಂಸತ್ತಿನ ಚುನಾಯಿತ ಸದಸ್ಯರು, ಶಾಸನ ಸಭೆ ಸದಸ್ಯರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ವಿಚಾರಣೆ ನಡೆಸುವ ಸಂಬಂಧ ಈ ನ್ಯಾಯಾಲಯಗಳನ್ನು ಸ್ಥಾಪಿಸಿದ್ದು ಎಎಪಿ ಶಾಸಕರ ಪ್ರಕರಣ ಸಹ ಮುಂದಿನ ದಿನಗಳಲ್ಲಿ ಇಲ್ಲಿಯೇ ವಿಚಾರಣೆಗೆ ಬರಲಿದೆ ಎಂದು ನ್ಯಾಯಾಲಯದ ಮೂಲಗಳು ಹೇಳಿದೆ.