ಬ್ಯಾಂಕ್ ವಂಚನೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಭಾರತೀಯ ತನಿಖಾ ಏಜನ್ಸಿಗಳನ್ನು ಚೋಕ್ಸಿ ತೀವ್ರವಾಗಿ ಟೀಕಿಸಿ ಪತ್ರ ಬರೆದಿದ್ದಾರೆ. ಸಿಬಿಐ ಗೆ ಪತ್ರ ಬರೆದಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಪ್ರಕರಣದ ತನಿಖೆ ನಡೆಸುತ್ತಿರುವ ಸಂಸ್ಥೆಗಳು ತಮ್ಮ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದೆ, ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡುತ್ತಿದೆ ಹಾಗೂ ಭಾರತದಲ್ಲಿನ ನಮ್ಮೆಲ್ಲಾ ವ್ಯವಹಾರ ಶಾಖೆಗಳನ್ನು ಮುಚ್ಚುತ್ತಿದೆ, ಇದು ನಮ್ಮ ಮೇಲೆ ತನಿಖಾಧಿಕಾರಿಗಳಿಗಿರುವ ಪೂರ್ವಾಗ್ರಹವನ್ನು ತೋರಿಸಿದೆ ಎಂದು ದೂರಿದ್ದಾರೆ.