ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮತ್ತೋರ್ವ ಹಿರಿಯ ವಕೀಲ ಹಾಗೂ ಎನ್ ಸಿಪಿ ಮುಖಂಡ ಮಜೀದ್ ಮೆಮನ್ ಅವರು, ದುಬೈನಿಂದ ಗಡಿಪಾರಾದ ಹಿನ್ನಲೆಯಲ್ಲಿ ಆತ ಭಾರತಕ್ಕೆ ವಾಪಸ್ ಆಗಿದ್ದು, ಈ ಹೊತ್ತಿನಲ್ಲಿ ಸಿಬಿಐ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. ಆತನ ಮೇಲೆ ಟಾಡಾ ಪ್ರಕರಣದಡಿಯಲ್ಲಿ ಗಂಭೀರ ಪ್ರಕರಣ ದಾಖಲಾಗಿದ್ದು, ಆತನಿಗೆ ಜಾಮೀನು ದೊರೆಯುವ ಸಾಧ್ಯತೆಯೇ ಇಲ್ಲ. ನ್ಯಾಯಾಲಯದ ಮುಂದಿನ ಆದೇಶದ ವರೆಗೂ ಆತ ಜೈಲಿನಲ್ಲೇ ಇರಬೇಕು ಎಂದು ಹೇಳಿದ್ದಾರೆ.