ಪ್ರಮಾಣವಚನ ಸಮಾರಂಭಕ್ಕೆ ಮಾಣಿಕ್ ಸರ್ಕಾರ್ ಗೆ ತ್ರಿಪುರ ನಿಯೋಜಿತ ಸಿಎಂ ಆಹ್ವಾನ

ತ್ರಿಪುರ ನಿಯೋಜಿತ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್
ಮಾಣಿಕ್ ಸರ್ಕಾರ್ ಗೆ ಆಹ್ವಾನ ನೀಡುತ್ತಿರುವುದು.
ಮಾಣಿಕ್ ಸರ್ಕಾರ್ ಗೆ ಆಹ್ವಾನ ನೀಡುತ್ತಿರುವುದು.
ಅಗರ್ತಾಲ: ತ್ರಿಪುರ ನಿಯೋಜಿತ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ನಿರ್ಗಮಿತ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರಿಗೆ ಗುರುವಾರ ಆಹ್ವಾನ ನೀಡಿದ್ದಾರೆ.
ಇಂದು ನಾವು ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರನ್ನು ಭೇಟಿ ಮಾಡಿ, ನಾಳೆ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಿದ್ದೇವೆ ಮತ್ತು ಅವರು ನಮ್ಮ ಆಹ್ವಾನವನ್ನು ಸ್ವೀಕರಿಸಿದ್ದು, ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಮಾಧವ್ ಅವರು ಹೇಳಿದ್ದಾರೆ.
ದೇಬ್ ಅವರು ನಾಳೆ ಬೆಳಗ್ಗೆ 10.30ಕ್ಕೆ ತ್ರಿಪುರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಾರ್ಚ್ 3ರಂದು ಸಿಪಿಐ-ಎಂನ 25 ವರ್ಷಗಳ ಆಡಳಿತಕ್ಕೆ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಅಂತ್ಯ ಹಾಡಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com