ಈ ವೇಳೆ, ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಸರ್ಕಾರ ರಚನೆ ಮೂಲಕ ತ್ರಿಪುರಾದಲ್ಲಿ ಅಭಿವೃದ್ಧಿಯ ಹಣತೆ ಹಚ್ಚಿದ್ದೇವೆ. ನಿಜಕ್ಕೂ ತ್ರಿಪುರಾಗೆ ಇಂದು ಐತಿಹಾಸಿಕ ದಿನವಾಗಿದ್ದು, ರಾಜ್ಯದ ಜನತೆ ದೀಪಾವಳಿ ಆಚರಿಸುತ್ತಿದ್ದಾರೆ ಎಂಬ ಭಾವನೆ ಮೂಡುತ್ತಿದೆ. ತ್ರಿಪುರಾದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ರಚನೆ ಮಾಡುವ ಮೂಲಕ ಅಭಿವೃದ್ಧಿ ಮತ್ತು ಸಮೃದ್ಧಿಯ ಹಣತೆ ಹಚ್ಚಿದ್ದೇವೆ. ತ್ರಿಪುರಾ ಜನರಲ್ಲಿ ಹೊಸ ಹುರುಪು ಮತ್ತು ಉತ್ಸಾಹ ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.