ಭಾರತವೂ ಸಿರಿಯಾ ಆಗಲಿದೆ ಎಂದು ಹೇಳಿದ್ದ ರವಿಶಂಕರ್ ಗುರೂಜಿ ವಿರುದ್ಧ ಪ್ರಕರಣ ದಾಖಲು
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ವಿರುದ್ಧ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈರಿ ಲಖನೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ...
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ
ಲಖನೌ: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ವಿರುದ್ಧ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈರಿ ಲಖನೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಒಂದು ವೇಳೆ ನ್ಯಾಯಾಲಯ ದೇವಸ್ಥಾನದ ವಿರುದ್ಧ ತೀರ್ಪು ಪ್ರಕಟಿಸಿದ್ದಲ್ಲಿ, ರಕ್ತಪಾತವೇ ಆಗಲಿದೆ, ಅಲ್ಲದೆ, ತೀರ್ಪು ಒಂದು ಪಕ್ಷದ ಪರವಾಗಿದಿದ್ದರೆ ಭಾರತದ ಪರಿಸ್ಥಿತಿಯೂ ಸಿರಿಯಾ ರೀತಿಯೇ ಆಗಲಿದೆ ಎಂದು ರವಿಶಂಕರ್ ಗುರೂಜಿಯವರು ಈ ಹಿಂದೆ ಹೇಳಿದ್ದರು.
ಶ್ರೀಗಳ ಹೇಳಿಕೆಗೆ ಅಸಾದುದ್ದೀನ್ ಓವೈಸಿ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಹೇಳಿಕೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.