ಉತ್ತರ ಪ್ರದೇಶದ ಮೀರತ್ನಲ್ಲಿ ಬುಧವಾರ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿದ್ದನ್ನು ಖಂಡಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ಹಿನ್ನೆಲೆಯಲ್ಲಿ, ಸಿಎಂ ಯೋಗಿ ಆದಿತ್ಯನಾಥ್, ಗುರುವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಇಂಥ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ. ಇದಕ್ಕೂ ಮೊದಲು ಸೋಮವಾರ ತ್ರಿಪುರಾದಲ್ಲಿ ಕಮ್ಯೂನಿಸ್ಟ್ ನಾಯಕ ಲೆನಿನ್ ಅವರ ಎರಡು ಪ್ರತಿಮೆಗಳು ಧ್ವಂಸಗೊಂಡ ನಂತರ, ತಮಿಳುನಾಡಿನಲ್ಲಿ ಸಾಮಾಜಿಕ ಹೋರಾಟಗಾರ ಪೆರಿಯಾರ್, ಕೋಲ್ಕತಾದಲ್ಲಿ ಜನ ಸಂಘ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಮೀರತ್ನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಂಡಿದ್ದವು.