ಕೆಲಸ ಮಾಡಲು ನಿರಾಕರಿಸಿದಾಗ ನನ್ನನ್ನು ಎರಡು ದಿನಗಳ ಆಹಾರ, ನೀರು ನೀಡದೆ ಕೋಣೆಯೊಂದರಲ್ಲಿ ಕೂಡಿ ಹಾಕಿದ್ದರು. ಬಳಿಕ ಅಲ್ಲಿಂದ ತಪ್ಪಿಸಿಕೊಂಡು ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದ್ದೆ. ಇದೀಗ ರೇಷ್ಮಾ ಅವರನ್ನು ಭಾರತೀಯ ರಾಯಭಾರಿ ಕಚೇರಿ ರಕ್ಷಣೆ ಮಾಡಿದ್ದು, ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ರೇಷ್ಮಾ ಅವರು ಧನ್ಯವಾದಗಳನ್ನು ಹೇಳಿದ್ದಾರೆ. ಅಲ್ಲದೆ, ತಮ್ಮ ಮಗಳನ್ನು ರಕ್ಷಣೆ ಮಾಡುವಂತೆ ಸುಷ್ಮಾ ಸ್ವರಾಜ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ.