ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಟಿಡಿಪಿಯ ಅಶೋಕ್ ಗಜಪತಿ ರಾಜು ಅವರ ರಾಜಿನಾಮೆಯಿಂದ ತೆರವಾದ ನಾಗರಿಕ ವಿಮಾನಯಾನ ಖಾತೆಯನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಅವರಿಗೆ ಹೆಚ್ಚುವರಿಯಾಗಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸಿನಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ನಾಗರಿಕ ವಿಮಾನಯಾನ ಖಾತೆಯ ಜವಾಬ್ದಾರಿಯನ್ನು ಸುರೇಶ್ ಪ್ರಭು ಅವರಿಗೆ ವಹಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಸೂಚನೆಯಂತೆ ಅಶೋಕ್ ಗಜಪತಿ ರಾಜು ಮತ್ತು ಎಂಪಿ ವೈಎಸ್ ಚೌಧರಿ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಕೇಂದ್ರ ಸರ್ಕಾರದಿಂದ ಹೊರಬಂದಿದ್ದರು.