ಈ ಬಗ್ಗೆ ಇಂದು ಕೇಂದ್ರ ರಕ್ಷಣಾ ಸಚಿವಾಲಯ ಲೋಕಸಭೆಗೆ ಮಾಹಿತಿ ನೀಡಿದ್ದು, ಕೇಂದ್ರ ಗೃಹ ಸಚಿವಾಲಯದ ರಾಜ್ಯಸಚಿವ ಹಂಸರಾಜ್ ಗಂಗಾರಾಮ್ ಅಹಿರ್ ಅವರು ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಅವರು, 2018ರ ಜನವರಿಯಿಂದ ಮಾರ್ಚ್ ತಿಂಗಳವರೆಗೂ ಕಣಿವೆ ರಾಜ್ಯದಲ್ಲಿ ಒಟ್ಟು 60 ಗಲಭೆ ಹಾಗೂ ಭಯೋತ್ಪಾದಕ ಹಿಂಸಾಕೃತ್ಯಗಳು ನಡೆದಿದ್ದು, ಈ ಘಟನೆಗಳಿಂದಾಗಿ ಒಟ್ಟು 17 ಉಗ್ರರು ಹತರಾಗಿದ್ದು, ಅಂತೆಯೇ 15 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ.