ಐಎನ್ಎಕ್ಸ್ ಮೀಡಿಯಾ ಕೇಸ್: ಕಾರ್ತಿ ಚಿದಂಬರಂ ಸಿಎಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು

ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಕಾರ್ತಿ ಚಿದಂಬರಂ ಅವರ ಚಾರ್ಟೆರ್ಡ್ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಕಾರ್ತಿ ಚಿದಂಬರಂ ಅವರ ಚಾರ್ಟೆರ್ಡ್ ಅಕೌಂಟೆಂಡ್ ಎಸ್.ಭಾಸ್ಕರರಾಮನ್ ಅವರಿಗೆ ದೆಹಲಿ ಕೋರ್ಟ್ ಇಂದು ಜಾಮೀನು ನೀಡಿದೆ.

ಫೆಬ್ರವರಿ 16ರಂದು ದೆಹಲಿಯ ಸ್ಟಾರ್ ಹೊಟೇಲ್ ನಿಂದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಭಾಸ್ಕರರಾಮನ್ ಬಂಧಿತರಾಗಿದ್ದರು. ಅವರಿಗೆ ಇಂದು ವಿಶೇಷ ನ್ಯಾಯಾಧೀಶ ಸುನಿಲ್ ರಾಣಾ ಜಾಮೀನು ಮಂಜೂರು ಮಾಡಿದ್ದಾರೆ.

ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ 2 ಲಕ್ಷ ಬಾಂಡ್ ಮತ್ತು ಅಷ್ಟೇ ಮೊತ್ತದ ಭದ್ರತೆಯನ್ನು ನ್ಯಾಯಾಲಯಕ್ಕೆ ಕಟ್ಟುವಂತೆ ಕೋರ್ಟ್ ಷರತ್ತು ವಿಧಿಸಿದೆ. ಹಾಗೂ ಮುಂದಿನ ದಿನಗಳಲ್ಲಿ ತನಿಖೆ ವೇಳೆ ಎಲ್ಲಾ ರೀತಿಯ ಸಹಕಾರವನ್ನು ಜಾರಿ ನಿರ್ದೇಶನಾಲಯಕ್ಕೆ ನೀಡಬೇಕೆಂದು ಮತ್ತು ಪೂರ್ವಾನುಮತಿಯಿಲ್ಲದೆ ದೇಶ ಬಿಟ್ಟು ಹೋಗದಂತೆ ಭಾಸ್ಕರರಾಮನ್ ಅವರಿಗೆ ಆದೇಶ ನೀಡಲಾಗಿದೆ.

ತಮ್ಮ ಕಸ್ಟಡಿ ವಿಚಾರಣೆ ಅಗತ್ಯವಿಲ್ಲವೆಂದು ಮತ್ತು ತಮ್ಮನ್ನು ಬಂಧನದಲ್ಲಿಡುವ ಯಾವುದೇ ಅವಶ್ಯಕತೆಯಿಲ್ಲ ಎಂದು ಕೋರಿ ಭಾಸ್ಕರರಾಮನ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com