ಆರೋಪಿಗಳ ವಿರುದ್ಧ ಮೇಲ್ನೋಟಕ್ಕೆ ಅಪರಾಧ ಸಾಬೀತಾಗುವ ಸಾಕ್ಷ್ಯಗಳು ಇಲ್ಲದ ಕಾರಣ ವಿಶೇಷ ಕೋರ್ಟ್ ನ ನ್ಯಾಯಮೂರ್ತಿ ನಟರಾಜನ್ ಪ್ರಕರಣದ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ. 2018 ರ ಫೆಬ್ರವರಿ ತಿಂಗಳಲ್ಲಿ ದಯಾನಿಧಿ ಮಾರನ್, ಕಲಾನಿಧಿ ಮಾರನ್ ತಮ್ಮನ್ನು ಪ್ರಕರಣದಿಂದ ವಜಾಗೊಳಿಸಬೇಕೆಂದು ಕೋರಿದ್ದ ಅರ್ಜಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿತ್ತು.