ಬಿಜೆಪಿ ದುರಾಡಳಿತಕ್ಕೆ ಜನತೆ ಕೊಟ್ಟ ತೀರ್ಪು- ಅಖಿಲೇಶ್ ಯಾದವ್

ಉತ್ತರ ಪ್ರದೇಶದ ಗೋರಖ್ ಪುರ ಹಾಗೂ ಫಲ್ಪುರ್ ಲೋಕಸಭಾ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಗೆಲುವು ಬಿಜೆಪಿ ದುರಾಡಳಿತಕ್ಕೆ ಜನತೆ ಕೊಟ್ಟ ತೀರ್ಪು ಎಂದು ಪಕ್ಷದ ಮುಖ್ಯಸ್ಥ ಅಖಿಲ್ ಯಾದವ್ ಹೇಳಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Updated on

ಉತ್ತರ ಪ್ರದೇಶ : ಉತ್ತರ ಪ್ರದೇಶದ ಗೋರಖ್ ಪುರ ಹಾಗೂ ಫಲ್ಪುರ್ ಲೋಕಸಭಾ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಗೆಲುವು ಬಿಜೆಪಿ ದುರಾಡಳಿತಕ್ಕೆ ಜನತೆ ಕೊಟ್ಟ ತೀರ್ಪು ಎಂದು ಪಕ್ಷದ ಮುಖ್ಯಸ್ಥ ಅಖಿಲ್ ಯಾದವ್ ಹೇಳಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗೆಲುವು ರಾಷ್ಟ್ರೀಯ ಪಕ್ಷಗಳಿಗೆ  ಸ್ಪಷ್ಪ ರಾಜಕೀಯ ಸಂದೇಶ ರವಾನಿಸಿದೆ. ಜಿಎಸ್ ಟಿ ಹಾಗೂ ನೋಟ್ ರದ್ದತಿ ನಂತರ ಕೃಷಿಕರು ಅಸಂತೋಷಗೊಂಡಿದ್ದಾರೆ.  ಇದು ಚುನಾವಣೆಯಲ್ಲಿ ಪರಿಣಾಮ ಬೀರಿದೆ ಎಂದರು.

ಬಿಜೆಪಿ ಜನತೆಗೆ ನೀಡಿದ್ಧ ಭರವಸೆ ಈಡೇರಿಸುವಲ್ಲಿ ವಿಫಲವಾಗಿದ್ದು,  ಈ ಗೆಲುವು  ಸಾಮಾಜಿಕ ನ್ಯಾಯಕ್ಕೆ ಸಂದ ಜಯವಾಗಿದ್ದು, ಉಪಚುನಾವಣೆ ಮೊದಲೇ ಮೈತ್ರಿ ಮಾಡಿಕೊಂಡಿದ್ದ ಬಿಎಸ್ಪಿ ಅಧಿನಾಯಕಿ ಮಾಯಾವತಿ ಹಾಗೂ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ಅಖಿಲೇಶ್ ಯಾದವ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com