ಮೇವು ಹಗರಣ ಸಂಬಂಧ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರು ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಜೈಲಲ್ಲೇ ತಮ್ಮ ಬೆಂಬಲಿಗರೊಂದಿಗೆ ಸಂಭ್ರಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಲಾಲು ಪ್ರಸಾದ್ ಯಾದವ್, ತಮ್ಮ ವಿರುದ್ಧದ ಎಲ್ಲ ಷಡ್ಯಂತ್ರಗಳಿಗೆ ರಾಜ್ಯದ ಜನತೆ ಸೂಕ್ತ ರೀತಿಯಲ್ಲಿ ಉತ್ತರ ನೀಡಿದ್ದಾರೆ. ಇದು ನಿಜಕ್ಕೂ ಸುಳ್ಳಿನ ವಿರುದ್ಧ ಸತ್ಯಕ್ಕೆ ಸಂದ ಜಯವಾಗಿದೆ. ಪಿತೂರಿ ಮಾಡಿ ನೀವು ಎಷ್ಚೇ ಸೀಮೆ ಎಣ್ಣೆ ಸುರಿದರೂ ಲಾಟೀನು (ಆರ್ ಜೆಡಿ ಪಕ್ಷದ ಚಿನ್ಹೆ) ಅಷ್ಟೇ ಪ್ರಕಾಶಮಾನವಾಗಿ ಪ್ರಜ್ವಲಿಸುತ್ತದೆ. ನನ್ನ ವಿರುದ್ಧ ನಡೆದ ಪಿತೂರಿಗೆ ಬಿಹಾರದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಲಾಲೂ ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.