ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಭಾವಚಿತ್ರ ಹೊಂದಿರುವ ಧ್ವಜವನ್ನು ಅಮ್ಮ ಮಕ್ಕಳ್ ಮುನ್ನೇತ ಕಳಗಂ ಪಕ್ಷ ಒಳಗೊಂಡಿದೆ.
ಹೊಸ ಪಕ್ಷ ಘೋಷಣೆ ಮಾಡಿದ ಬಳಿಕ ಮಾತನಾಡಿರುವ ದಿನಕರನ್ ಅವರು, ಮೂಲ ಎಐಎಡಿಎಂಕೆ ಪಕ್ಷದ ಎರಡೆಲೆ ಚಿಹ್ನೆಯನ್ನು ದ್ರೋಹಿಗಳಿಂದ ಮರಳಿ ಪಡೆಯುವರೆಗೂ ನಮ್ಮ ನೂತನ ಪಕ್ಷದ ಚಿಹ್ನೆಯು ಕುಕ್ಕರ್ ಆಗಿರುತ್ತದೆ ಎಂದು ದಿನಕರನ್ ಅವರು ಹೇಳಿದ್ದಾರೆ.
ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆಯ ಚುನಾವಣೆಯಲ್ಲಿ ನಾವು ಗೆಲವು ಸಾಧಿಸಲಿದ್ದೇವೆಂದು ತಿಳಿಸಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ನಿಧನ ಹೊಂದಿದ ಬಳಿಕ ತೆರವಾದ ರಾಧಾಕೃಷ್ಣ ನಗರ (ಆರ್.ಕೆ.ನಗರ) ವಿಧಾನಸಭಾ ಕ್ಷೇತ್ರಕ್ಕೆ ಕಳೆದ ವರ್ಷ ಡಿ.21 ರಂದು ಮತದಾನ ನಡೆದಿತ್ತು. ಉಪ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ದಿನಕರನ್ ಅವರು ಗೆಲವು ಸಾಧಿಸಿದ್ದರು.