ಹೃಷಿಕೇಶದಲ್ಲಿ ಸೂಪರ್ ಸ್ಟಾರ್: ಸಾಧು ಸಂತರಿಗೆ ಭೋಜನ ವ್ಯವಸ್ಥೆ ಮಾಡಿದ ರಜನಿ

ತಮಿಳು ನಟ ಸೂಪರ್ ಸ್ಟಾರ್ ರಜನೀಕಾಂತ್ ಹೃಷಿಕೇಶದ ಸ್ವಾಮಿ ದಯಾನಂದ ಸ್ವಾಮಿ ಆಶ್ರಮಕ್ಕೆ ತೆರಳಿ ಸಂತರನ್ನು ಭೇಟಿಯಾಗಿದ್ದಾರೆ....
ಹೃಷಿಕೇಶದಲ್ಲಿ ರಜನೀಕಾಂತ್
ಹೃಷಿಕೇಶದಲ್ಲಿ ರಜನೀಕಾಂತ್
ನವದೆಹಲಿ: ತಮಿಳು ನಟ ಸೂಪರ್ ಸ್ಟಾರ್ ರಜನೀಕಾಂತ್ ಹೃಷಿಕೇಶದ ಸ್ವಾಮಿ ದಯಾನಂದ ಸ್ವಾಮಿ ಆಶ್ರಮಕ್ಕೆ ತೆರಳಿ ಸಂತರನ್ನು ಭೇಟಿಯಾಗಿದ್ದಾರೆ.
ಪ್ರತಿ ವರ್ಷ ಅಧಾತ್ಮ ಪ್ರವಾಸ ಕೈಗೊಳ್ಳುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಈ ವರ್ಷವೂ ಉತ್ತರ ಭಾರತದ ಕೆಲವೆಡೆ ಪ್ರವಾಸ ಆರಂಭಿಸಿದ್ದು,  ಮಂಗಳವಾರ ಉತ್ತರಾಖಂಡದ ಆಶ್ರಮಕ್ಕೆ ತೆರಳಿದ್ದರು. 
ಉತ್ತರಾಖಂಡದ ಸ್ವಾಮಿ ದಯಾನಂದ ಆಶ್ರಮದಲ್ಲಿ ಪ್ರಾರ್ಥನೆ ಸಲ್ಲಿಸಿದ ರಜನಿಕಾಂತ್, ಅವರಿಗಾಗಿ ಹೊರಗೆ ಕಾದು ನಿಂತಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. 
ತಾವು ಅಧ್ಯಾತ್ಮ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಈ ವರ್ಷದ ಆರಂಭದಲ್ಲಿ ರಜನೀಕಾಂತ್ ರಾಜಕೀಯ ಪ್ರವೇಶಿಸಲಿದ್ದು, ಹೊಸ ಪಕ್ಷ ಕಟ್ಟುವ ಘೋಷಣೆ ಮಾಡುವುದಾಗಿ ಹೇಳಿದ್ದರು, ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ತಮಿಳುನಾಡಿನ 234 ವಿಧಾನಾಸಭೆ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದರು, ಆದರೆ ಇದುವರೆಗೂ ರಜನೀಕಾಂತ್ ತಮ್ಮ ಪಕ್ಷದ ಹೆಸರನ್ನು ಘೋಷಿಸಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com