ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಅವಕಾಶ ನೀಡುವಂತೆ ವೈಎಸ್ಆರ್ ಕಾಂಗ್ರೆಸ್ ಪಕ್ಷವು ನಿನ್ನೆಯಷ್ಟೇ ಲೋಕಸಭೆಯಲ್ಲಿ ನೋಟಿಸ್ ನೀಡಿತ್ತು. ಇದಕ್ಕೆ ಟಿಡಿಪಿ ಕೂಡ ಬೆಂಬಲ ಸೂಚಿಸಿತ್ತು. ಆದರೆ, ಪಕ್ಷದ ಸಭೆಯ ಬಳಿಕ, ಕೇಂದ್ರದ ವಿರುದ್ಧ ಪ್ರತ್ಯೇಕವಾಗಿ ಅವಿಶ್ವಾಸ ಗೊತ್ತುವಳಿ ಮಂಡಿಸಲಾಗುವುದು ಎಂದು ಟಿಡಿಪಿ ತಿಳಿಸಿತ್ತು.