"ರಾಮಸೇತುವಿಗೆ ಹಾನಿ ಮಾಡದೇ, ರಾಷ್ಟ್ರದ ಹಿತದೃಷ್ಟಿಯಿಂದ ಸೇತುಸಮುದ್ರಂ ಯೋಜನೆಗೆ ಪರ್ಯಾಯ ಮಾರ್ಗ ಹುಡುಕುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದು ಕೇಂದ್ರ ನೌಕಾ ಸಾರಿಗೆ ಇಲಾಖೆ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ನ ಲ್ಲಿ ಅಫಿಡವಿಟ್ ಸಲ್ಲಿಸಿದ್ದಾರೆ.