ಪಶ್ಚಿಮ ಬಂಗಾಳದಲ್ಲಿ ನೆಹರೂ ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳು

ಲೆನಿನ್​, ಪೆರಿಯಾರ್​, ಅಂಬೇಡ್ಕರ್ ನಂತರ ಈಗ ದೇಶದ ಮೊದಲ ಪ್ರಧಾನಿ ಜವಾಹರ್​ ಲಾಲ್​ ನೆಹರೂ ಅವರ....
ಜವಾಹರ್​ ಲಾಲ್​ ನೆಹರೂ ಪ್ರತಿಮೆ
ಜವಾಹರ್​ ಲಾಲ್​ ನೆಹರೂ ಪ್ರತಿಮೆ
ಬರ್ದ್ವಾನ್: ಲೆನಿನ್​, ಪೆರಿಯಾರ್​, ಅಂಬೇಡ್ಕರ್ ನಂತರ ಈಗ ದೇಶದ ಮೊದಲ ಪ್ರಧಾನಿ ಜವಾಹರ್​ ಲಾಲ್​ ನೆಹರೂ ಅವರ ಪ್ರತಿಮೆಗೆ ದುಷ್ಕರ್ಮಿಗಳು ಕಪ್ಪು ಬಣ್ಣ ಎರಚಿ ಅವಮಾನ ಮಾಡಿದ್ದಾರೆ. 
ಪಶ್ಚಿಮ ಬಂಗಾಳದ ಕಟ್ವಾ ಪಟ್ಟಣದಲ್ಲಿರುವ ಮಾಜಿ ಪ್ರಧಾನಿ ನೆಹರೂ ಅವರ ಪ್ರತಿಮೆಗೆ ಶನಿವಾರ ಕಿಡಿಗೇಡಿಗಳು ಕಪ್ಪು ಇಂಕ್​ ಎರಚಿ ವಿರೂಪಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಬಿಜೆಪಿ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ.
ಕಟ್ವಾದ ಟೆಲೆಫೋನ್ ಮೈದಾನದಲ್ಲಿರುವ ನೆಹರೂ ಪ್ರತಿಮೆಗೆ ಕಪ್ಪು ಬಣ್ಣ​ ಎರಚಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಘಟನೆಯ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ, ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com