ವಿಭಜಿತ ಆಂಧ್ರ ಪ್ರದೇಶದ ಅಭಿವೃದ್ಧಿ ಕುರಿತು ಚಿಂತಸಬೇಕಾದ ಸರ್ಕಾರದ ಮುಖ್ಯಸ್ಥರೇ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಹೊಸ ರಾಜಧಾನಿ ನಿರ್ಮಾಣ ಯೋಜನೆಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಬಿಜೆಪಿಯೊಂದಿಗೆ ಸೇರಿ ರಹಸ್ಯ ಒಪ್ಪಂದ ಮಾಡಿಕೊಂಡಿರುವ ನಾಯ್ಜು, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡಿಸುವ ಬದಲಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಗೆ ಒಪ್ಪಿಗೆ ನೀಡಿದ್ದರು. ಈಗ ಆಂಧ್ರ ಪ್ರದೇಶದ ಜನತೆ ತಿರುಗಿಬಿದ್ದಿರುವ ಹಿನ್ನಲೆಯಲ್ಲಿ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.