2014ರಲ್ಲಿ ದೆಹಲಿ ಮೂಲದ ಕಂಪನಿಯೊಂದಕ್ಕೆ ನೀಡಿದ್ದ 68.38 ಕೋಟಿ ರುಪಾಯಿ ಸಾಲ ಮರುಪಾವತಿಸದೆ ಬ್ಯಾಂಕ್ ಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನರಾ ಬ್ಯಾಂಕ್ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್ ಕೆ ದುಬೆ, ಮಾಜಿ ಕಾರ್ಯನಿರ್ವಹಕ ನಿರ್ದೇಶಕರಾದ ಅಶೋಕ್ ಕುಮಾರ್ ಗುಪ್ತಾ ಹಾಗೂ ವಿಎಸ್ ಕೃಷ್ಣನ್, ಮಾಜಿ ಡಿಜಿಎಂ, ಮುಖೇಶ್ ಮಹಾಜನ್, ಮಾಜಿ ಮುಖ್ಯ ಜನರಲ್ ಮ್ಯಾನೇಜರ್ ಟಿ ಶ್ರೀಕಾಂತನ್ ಹಾಗೂ ಮಾಜಿ ಸಹಾಯಕ ಜನರಲ್ ಮ್ಯಾನೇಜರ್ ಉಪೇಂದ್ರ ದುಬೆ ವರ ವಿರುದ್ಧ ಸಿಬಿಐ ಇಂದು ಸಿಬಿಐ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.