ಸೋಮವಾರ ಚೆನ್ನೈನಲ್ಲಿ ಮಾತನಾಡಿದ ಪನ್ನೀರ್ ಸೆಲ್ವಂ ಅವರು, ಕಾವೇರಿ ವಿಚಾರವನ್ನು ಆಂಧ್ರ ಪ್ರದೇಶದ ಸಮಸ್ಯೆಗೆ ಹೋಲಿಕೆ ಮಾಡಬೇಡಿ. ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಲು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನಮ್ಮ ಆಗ್ರಹ ಮುಂದುವರೆಯಲಿದ್ದು, ಅಂತೆಯೇ ಈ ಸಂಬಂಧ ಪ್ರತಿಭಟನೆ ಮುಂದುವರೆಯಲಿದೆ. ಈ ಹಿಂದೆ ಕಾವೇರಿ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ 6 ವಾರಗಳ ಕಾಲ ಕಾಲಾವಕಾಶ ನೀಡಿದೆ. ಅಲ್ಲಿಯವರೆಗೂ ಕಾದು ನೋಡೋಣ. ಬಳಿಕ ಮುಂದಿನ ನಿರ್ಧಾರದ ಕುರಿತು ಆಲೋಚಿಸೋಣ ಎಂದು ಹೇಳಿದ್ದಾರೆ.